ಬಾಗಲಕೋಟೆ ಜಿಲ್ಲೆಯ ತುಳಸಿಗೇರಿ ಗ್ರಾಮದಲ್ಲಿ ಮದ್ಯ ಸೇವನೆಗೆ ಹಣ ಕೊಡದ ಕಾರಣಕ್ಕೆ 28 ವರ್ಷದ ವೆಂಕಟೇಶ್ ಗಿರಿಸಾಗರ ಎಂಬಾತ ತನ್ನ 58 ವರ್ಷದ ತಾಯಿ ಶಾವಕ್ಕ ಗಿರಿಸಾಗರ ಅವರ ಕೈಕಾಲು ಕಟ್ಟಿ, ಬಾಯಲ್ಲಿ ಬಟ್ಟೆ ತುರುಕಿ, ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ.




ಗುರುವಾರ ಈ ಘಟನೆ ನಡೆದಿದ್ದು, ತಾಯಿ ಕೂಲಿ ಮಾಡಿ ತಂದ ಹಣವನ್ನು ಮಗ ಕುಡಿತಕ್ಕೆ ಬಳಸುತ್ತಿದ್ದನು. ಹಣ ಕೊಡಲು ನಿರಾಕರಿಸಿದಾಗ ಈ ಕೃತ್ಯ ಎಸಗಿದ್ದಾನೆ. ಪೊಲೀಸರು ಆರೋಪಿ ವೆಂಕಟೇಶನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.



