ಕರ್ನಾಟಕ ರಾಜ್ಯ : ಬೆಳ್ಳಂಬೆಳಗ್ಗೆ ರಾಜ್ಯದ ದಾವಣಗೆರೆ, ಮಡಿಕೇರಿ, ಬೀದರ್,ಚಿತ್ರದುರ್ಗದಲ್ಲಿ, ರಾಮನಗರ ಹಾಗೂ ಕೊಪ್ಪಳದಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. ಅಷ್ಟೇ ಅಲ್ಲದೆ ಬೆಂಗಳೂರಿನ ಹತ್ತಕ್ಕೂ ಹೆಚ್ಚು ಅಧಿಕಾರಿಗಳ ಮನೆ ಮೇಲೆ ದಾಳಿ ನಡೆದಿದೆ.

ಮಹದೇವಪುರ ವಲಯದ ಕಂದಾಯ ಅಧಿಕಾರ ನಟರಾಜ್ಗೆ ಸೇರಿದ “ಬಂಗಾರಗಿರಿ” ಮನೆ ಮೇಲೆ ದಾಳಿ ನಡೆದಿದೆ. ಈ ಹಿಂದೆಯೂ ಹಣ ಪಡೆಯುವಂತಹ ಸಂದರ್ಭದಲ್ಲಿ ಅಧಿಕಾರಿ ಸಿಕ್ಕಿಬಿದ್ದಿದ್ದರು.
ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ಸಣ್ಣ ನೀರಾವರಿ ಇಲಾಖೆಯ ಇಂಜಿನಿಯರ್ ಕೆ ಮಹೇಶ್ ಹಾಗೂ ಪತ್ನಿ ಭಾರತಿ ಮನೆ ಮೇಲೆ ದಾಳಿಯಾಗಿದ್ದು ದಾಳಿಯಲ್ಲಿ ಕಂತೆ ಹಣ, ಚಿನ್ನಾಭರಣ ಪತ್ತೆಯಾಗಿದೆ ಎನ್ನಲಾಗಿದೆ. ದಾವಣಗೆರೆ ಜಯನಗರದ ಮಹೇಶ್ ಗೌಡ ಮನೆ, ಬೀದರ್ ನಲ್ಲಿ ಕಾನ್ಸ್ ಸ್ಟೇಬಲ್ ವಿಜಯಕುಮಾರ್ ಮನೆ ಮೇಲೂ ದಾಳಿಯಾಗಿದೆ. ಮಡಿಕೇರಿ ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡ ಅವರ ಮನೆಯ ಮೇಲೂ ದಾಳಿಯಾಗಿದೆ. ಆದಾಯಕ್ಕೆ ಮೀರಿದ ಆಸ್ತಿ ಗಳಿಕೆ ಆರೋಪದ ಹಿನ್ನಲೆ ಏಕಕಾಲಕ್ಕೆ ರಾಜ್ಯದ ಹಲವೆಡೆ ದಾಳಿಯಳಂಬೆಳಗ್ಗೆ ಕನಕಪುರದಲ್ಲಿ ಬಿಬಿಎಂಪಿ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಕನಕಪುರ ತಾಲೂಕಿನ ಶಿವನಹಳ್ಳಿ ಗ್ರಾಮದಲ್ಲಿರುವ ಮನೆ ಮೇಲೆ ದಾಳಿಯಾಗಿದ್ದು, ಮನೆ ಜೊತೆ ಫಾರಂ ಹೌಸ್ ಅನ್ನೂ ಸೀಝ್ ಮಾಡಲಾಗಿದೆ. ಅಪಾರ ಪ್ರಮಾಣದ ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆ, ರಾಮನಗರ ಲೋಕಾಯುಕ್ತ ಎಸ್ಪಿ ನೇತೃತ್ವದಲ್ಲಿ ದಾಳಿ ನಡೆದಿದ್ದು, ಅಧಿಆಖರಿಗಳು ದಾಖಲೆಗಳನ್ನ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಳ್ಳಂಬೆಳಗ್ಗೆ ಕೊಪ್ಪಳದಲ್ಲಿ ಲೋಕಾಯುಕ್ತ ದಾಳಿ : ಕೊಪ್ಪಳದ ನಿರ್ಮಿತಿ ಕೇಂದ್ರದ ಕಚೇರಿ ವ್ಯವಸ್ಥಾಪಕ ಮಂಜುನಾಥ್ ಬನ್ನಿಕೊಪ್ಪ ಮನೆ ಹಾಗೂ ಕಚೇರಿ ಮೇಲೆ ದಾಳಿ ಗುರುವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ನಡೆದಿದೆ. ನಗರದ ಖಾಸಗಿ ಆಸ್ಪತ್ರೆ ಹಿಂಭಾಗದ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ ನಂತರ ಮಂಜುನಾಥ್ ಗೆ ಸಂಬಂಧಿಸಿದ ಹುಲಿಗಿಯಲ್ಲಿನ ಲಾಡ್ಜ್ ಮೇಲೂ ಲೋಕಾಯುಕ್ತ ದಾಳಿಯಾಗಿದೆ. ಒಟ್ಟು ಮೂರು ಸ್ಥಳಗಳಲ್ಲಿ ಐದು ತಂಡಗಳಿಂದ ದಾಳಿಯಾಗಿದೆ. ರಾಯಚೂರು ಲೋಕಾಯುಕ್ತ ಎಸ್ಪಿ ಆರ್ ಎಲ್ ಅರಸಿದ್ದಿ ನೇತೃತ್ವದಲ್ಲಿ ದಾಳಿಯಾಗಿದೆ. ಅಪಾರ ಪ್ರಮಾಣದ ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನಲೆಯಲ್ಲಿ ನಡೆದಿರುವ ದಾಳಿ ಇದಾಗಿದೆ.
ತುಮಕೂರಿನಲ್ಲಿಯೂ ಲೋಕಾಯುಕ್ತ ರೇಡ್ : ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಜಂಟಿ ನಿರ್ದೇಶಕ ನಾಗರಾಜು ಮನೆ ಮೇಲೆ ಲೋಕಾಯುಕ್ತ ದಾಳಿ ಆಗಿದೆ. ತುಮಕೂರಿನ ಸಪ್ತಗಿರಿ ಬಡಾವಣೆಯಲ್ಲಿರುವ ನಿವಾಸಕ್ಕೆ ದಾಳಿ ನಡೆಸಿ, ದಾಖಲಾತಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಇಂದು ಬೆಳಗ್ಗೆ 6 ಗಂಟೆಗೆ ತುಮಕೂರಿನ ಸಪ್ತಗಿರಿ ಬಡಾವಣೆಯಲ್ಲಿರುವ ಮನೆ ಹಾಗೂ ಟೂಡಾ ಕಚೇರಿ ಮೇಲೆ ಹಾಗೂ ಅರಸಿಕೆರೆಯ ನಿವಾಸದ ಮೇಲೆ, ಒಟ್ಟು ಮೂರು ಕಡೆ, ಮೂರು ಟೀಂ ನಿಂದ ದಾಳಿ ನಡೆಸಿದ್ದಾರೆ.
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಅರಸಿಕೆರೆ ಮೂಲದ ನಾಗರಾಜು, ಕಳೆದ ಒಂದೂವರೆ ವರ್ಷದ ಹಿಂದೆ ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಜಂಟಿ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಲೋಕಾಯುಕ್ತ ಅಧಿಕಾರಿಗಳಿಂದ ಶೋಧಕಾರ್ಯ ಮುಂದುವರಿದಿದೆ.
ಹೀಗೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ನಡೆದಿದೆ.




You’ve created something truly valuable here.
This is the kind of content that makes people fall in love with learning!
Such a vibrant, powerful, exciting read — THANK YOU!
I’m genuinely in awe — this is exceptional!
This article practically radiates enthusiasm — fantastic!
You’ve set the bar incredibly high — WOW!
This was incredibly helpful — thank you!
Thanks for sharing such well-thought-out content.
Thank you for putting so much heart into your writing.
Your enthusiasm is magnetic — I love it!
This was helpful, inspiring, and beautifully written.
I always look forward to your next article.
You have a real talent for communication.
Your passion for the topic really shines through.
You’ve mastered enthusiastic writing — seriously brilliant!
Your ability to explain things simply is such a gift.
Your vibrant approach is absolutely refreshing — great work!
I gained so much clarity from this article.
This gave me chills — absolutely incredible writing!
Absolutely brilliant — I’ll be bookmarking this!
You captured this topic perfectly.
I felt the excitement building as I read — fantastic job!
This is exactly the kind of excitement I love to read!
The enthusiasm here is unmatched — incredible work!